ಅರ್ಧ ತಲೆನೋವು ಜೊತೆ ಸಕ್ಕರೆ ಕಾಯಿಲೆ ಹೋಗಲಾಡಿಸುವ ಮನೆಮದ್ದು ಈ ನೆಲಬೇವು

ಆರೋಗ್ಯ

ನೆಲಬೇವು ಅಕೇಂಥೇಸಿಯೆ ಕುಟುಂಬಕ್ಕೆ ಸೇರಿದ ಮುಖ್ಯ ಔಷಧಿ ಬೆಳೆ. ಇದು ನೇರವಾಗಿ ಬೆಳೆಯುವ ಗಿಡ. ಹೂದಳಗಳು ಗುಲಾಬಿ ಬಣ್ಣವಿದ್ದು ಹೊರಭಾಗದಲ್ಲಿ ರೋಮಭರಿತವಾಗಿರುತ್ತದೆ. ಹಣ್ಣಿನ ಎರಡೂ ತುದಿಗಳು ಚೂಪಾಗಿ ಇರುತ್ತವೆ. ಬೀಜಗಳು ಬಹಳವಾಗಿದ್ದು ಅವುಗಳ ಬಣ್ಣ ಹಳದಿಯಿದ್ದು ಮೃದುವಾಗಿರುತ್ತದೆ.

ಜ್ವರ: ಮಲೇರಿಯಾ, ಟೈಫಾಯ್ಡ್ ಮತ್ತು ಯವುದೇ ದೀರ್ಘಕಾಲೀನ ಜ್ವರದಲ್ಲಿಯೂ ನೆಲಬೇವು ತುಂಬಾ ಉಪಯುಕ್ತವಾದುದು. ನೆಲಬೇವಿನ ಎಲೆಗಳರಸದೊಂದಿಗೆ ಬೇವು ಮತ್ತು ಅಮೃತಬಳ್ಳಿ ಎಲೆಗಳ ರಸವನ್ನು ಸಮಭಾಗ ತೆಗೆದುಕೊಂಡು ಅದಕ್ಕೆ ಜೇನು ಬೆರಸಿ ಕುಡಿಯುವುದರಿಂದ ಕಾಲರಾ ನಿಯಂತ್ರಣಕ್ಕೆ ಬರುತ್ತದೆ.

ಜಂತುಹುಳುವಿನ ತೊಂದರೆಯಿದ್ದಲ್ಲಿ ಪ್ರತಿದಿನ ರಾತ್ರಿಮಲಗುವ ಮುಂಚೆ ನೀವು ಏಳು ದಿನಗಳ ಕಾಲ ನೆಲಬೇವಿನ ಕಷಾಯ ಕುಡಿಯಬೇಕು. ಬಾಣಂತಿಯರಲ್ಲಿ ಎದೆಹಾಲಿನ ಉತ್ಪತ್ತಿ ಹೆಚ್ಚಿಸಲು ನೆಲಬೇವಿನ ಕಷಾಯ ಕುಡಿಸಬೇಕು. ನೆಲಬೇವಿನ ಕಷಾಯಕ್ಕೆ ಜೇನು ಬೆರೆಸಿ ಕುಡಿಸಬಹುದು.

ಬಾಯಿಹುಣ್ಣಿನ ತೊಂದರೆಯಿಂದ ಬಳಲುವವರು ನೆಲಬೇವಿನ ಕಾಂಡವನ್ನು ಒಂದು ರಾತ್ರಿ ಮಜ್ಜಿಗೆಯಲ್ಲಿ ಚೆನ್ನಾಗಿ ನೆನೆಯಿಟ್ಟು ನಂತರ ಅದನ್ನು ಒಣಗಿಸಿ ಪುಡಿ ಮಾಡಿಟ್ಟುಕೊಳ್ಳಬೇಕು. ಈ ಪುಡಿಯನ್ನು ಒಂದು ಚಮಚೆಯಷ್ಟುತೆಗೆದುಕೊಂಡು ತುಪ್ಪದಲ್ಲಿ ಹುರಿದು ಊಟ ಮಾಡುವಾಗ ಅನ್ನದೊಂದಿಗೆ ಬೆರೆಸಿ ತಿನ್ನಬೇಕು.

ಕಾಮಾಲೆ ಮತ್ತು ಇತರ ಯಕೃತ್ತಿನತೊಂದರೆಗಳಿಂದ ಬಳಲುವವರಿಗೆ ನೆಲಬೇವಿನ ಇಡೀ ಗಿಡದ ಕಷಾಯ ತುಂಬ ಉಪಯುಕ್ತ. ಹಾವು ಕಡಿತದಲ್ಲಿಯೂ ನೆಲಬೇವಿನ ಕಷಾಯ ತುಂಬ ಉಪಯುಕ್ತ, ಇದು ವಿಷಹರವಾಗಿ ಕೆಲಸ ಮಾಡುತ್ತದೆ.

ಅತಿ ರಕ್ತಸ್ರಾವ: ಸ್ತ್ರೀಯರಲ್ಲಿ ಮಾಸಿಕ ಸ್ರಾವವು ಅಧಿಕವಾಗುತ್ತಿದ್ದಲ್ಲಿ ನೆಲಬೇವಿನ ಕಷಾಯ ಮತ್ತು ಶ್ರೀಗಂಧದ ಕಷಾಯವನ್ನು ದಿನಕ್ಕೆ 3ಬಾರಿ ಕುಡಿಯಬೇಕು.

ಸಕ್ಕರೆ ಕಾಯಿಲೆಂದ ಬಳಲುವವರು: ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲಬೇವಿನ ಎಲೆಗಳನ್ನು ಹಾಗೆಯೇ ತಿನ್ನಬಹುದು ಇಲ್ಲವೇ ನೆಲಬೇವಿನ ರಸ ಅಥವಾ ಕಷಾಯವನ್ನು ಸೇವನೆ ಮಾಡಿದಲ್ಲಿ ರಕ್ತದಲ್ಲಿ ಸಕ್ಕರೆಯ ಅಂಶವು ಕಡಿಮೆಯಾಗುತ್ತದೆ.

ಅರ್ಧ ತಲೆನೋವು: ನೆಲಬೇವು, ಅಮೃತಬಳ್ಳಿ, ಬೇವಿನ ತೊಗಟೆ, ಅರಶಿನ ಸಮವಾಗಿ ಬೆರಸಿ ಕುಟ್ಟಿಪುಡಿ ಮಾಡಿ ನೀರಿನಲ್ಲಿ ಹಾಕಿ ಕುದಿಸಿ ಕಷಾಯ ತಯಾರಿಸಿ ದಿನಕ್ಕೆರಡು ಬಾರಿ ಕುಡಿಯಬೇಕು. ಎದೆಯುರಿ, ತಲೆಸುತ್ತು ಇದ್ದಲ್ಲಿ ಕಾಲು ಚಮಚೆ ಒಣಗಿದ ನೆಲಬೇವಿನ ನಯವಾದ ಪುಡಿಗೆ ಸಕ್ಕರೆ ಇಲ್ಲವೇ ಜೇನುತುಪ್ಪ ಬೆರೆಸಿ ಸೇವಿಸಬೇಕು.

ಸೂಚನೆ: ನಾವು ಹಾಕುವ ಎಲ್ಲ ಮಾಹಿತಿಗಳು ನಮ್ಮ ಸ್ವಂತ ಅನುಭವದ ಮತ್ತು ನಮ್ಮ ಅನಿಸಿಕೆ ಅಭಿಪ್ರಾಯಗಳಲ್ಲ ಕೇವಲ ಸಂಗ್ರಹದ ಮಾಹಿತಿಗಳು ಮಾತ್ರ ಯಾವುದೇ ಭಿನ್ನಾಭಿಪ್ರಾಯಗಳ ವಿಚಾರಗಳಿಗೆ ನಾವು ಜವಾಬ್ದರರಲ್ಲ

Leave a Reply

Your email address will not be published. Required fields are marked *