ಎರಡೇ ಎರಡು ಬೆಳ್ಳುಳ್ಳಿ ಎಸಳನ್ನು ಹಾಲಿನಲ್ಲಿ ಕುದಿಸಿ ಕುಡಿಯೋದ್ರಿಂದ ಎಷ್ಟೊಂದು ಲಾಭವಿದೆ. ಹಾಲು ಮತ್ತು ಬೆಳ್ಳುಳ್ಳಿ ವಿಟಮಿನ್ಗಳ ನಿದಿಯನ್ನೇ ಹೊಂದಿದೆ ಅನ್ನಬಹುದು. ಇದರಿಂದ ಸಿಗುವಂತ ಆರೋಗ್ಯಾಕ್ರಿ ಗುಣಗಳನ್ನು ಮುಂದೆ ತಿಳಿಸಲಾಗಿದೆ ನೋಡಿ.
ಮನುಷ್ಯನಿಗೆ ಬರುವಂತ ವಿಧದ ಕ್ಯಾನ್ಸರ್ಗಳನ್ನು ಗುಣಪಡಿಸುವ ಶಕ್ತಿ ಈ ಮಿಶ್ರಣಕ್ಕಿದೆ. ಆಂಟಿ ಆಕ್ಸಿಡೆಂಟ್ಗಳು ಹೆಚ್ಚಾಗಿ ಲಭ್ಯವಾಗುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತೆ. ಕ್ಯಾನ್ಸರ್ ಕಣಗಳ ವೃದ್ಧಿ ಕಡಿಮೆಯಾಗುತ್ತದೆ.
ವಯಸ್ಸು ಹೆಚ್ಚಾದಂತೆ ಕಾಣಿಸಿಕೊಳ್ಳುವ ವೃದ್ದಾಪ್ಯ ಕುರುಹುಗಳು ಬರುವುದಿಲ್ಲ. ಆಂಟಿ ಏಜಿಂಗ್ ಲಕ್ಷಣಗಳು ಧಾರಾಳವಾಗಿ ಇರುವ ಕಾರಣ, ಯೌವ್ವನವಾಗಿ ಕಾಣಿಸುತ್ತಾರೆ. ರಕ್ತದೊತ್ತಡ, ಮಧುಮೇಹ ಹಿಡಿತದಲ್ಲಿರುತ್ತದೆ. ರಕ್ತ ಸಂಚಾರ ಉತ್ತಮಗೊಳ್ಳುತ್ತದೆ. ಲಿವರ್ ಶುದ್ಧವಾಗುತ್ತದೆ. ಗಾಯಗಳಾಗಿರುವವರು ಈ ಮಿಶ್ರಣವನ್ನು ಕುಡಿದರೆ ಅವು ಶೀಘ್ರದಲ್ಲಿ ಗುಣಮುಖವಾಗುವ ಸಾಧ್ಯತೆಗಳಿವೆ. ಏಕೆಂದರೆ ಈ ಮಿಶ್ರಣದಲ್ಲಿ ಎರಡು ಪಟ್ಟು ಆಂಟಿ ಬಯೋಟಿಕ್ ಲಕ್ಷಣಗಳಿರುತ್ತವೆ.
ಚರ್ಮಕ್ಕೆ ಆಗಿರುವ ಫಂಗಸ್ ಇನ್ಫೆಕ್ಷನ್ ಗುಣವಾಗುತ್ತದೆ. ಚರ್ಮ ಸೌಂದರ್ಯ ಉತ್ತಮಗೊಳ್ಳುತ್ತದೆ. ಮೊಡವೆಗಳು ಬರುವುದಿಲ್ಲ. ಹಾಗು ಮೂಳೆಗಳು ದೃಢವಾಗುತ್ತವೆ. ಮೂಳೆ ಮುರಿದವರಿಗೆ ಈ ಮಿಶ್ರಣ ಕುಡಿಸಿದರೆ ಅವು ಕೂಡಿಕೊಳ್ಳುವ ಅವಕಾಶ ಇದೆ. ರಕ್ತ ಗಡ್ಡೆ ಕಟ್ಟದಂತೆ ನೋಡಿಕೊಳ್ಳುತ್ತದೆ. ರಕ್ತನಾಳಗಳಲ್ಲಿ ಸೇರಿಕೊಂಡಿರುವ ಕೊಬ್ಬಿನಂಶ ಕಡಿಮೆಯಾಗುತ್ತದೆ. ಅಲ್ಲದೆ ಅಧಿಕ ತೂಕ ಇರುವವರಿಗೆ ತೂಕ ಕಡಿಮೆಯಾಗುತ್ತಾರೆ.
ಉಷ್ಣದಿಂದ ತಲೆನೋವು ಬಂದಿದ್ದರೆ ಹುಣಸೆಹಣ್ಣು ಹಾಗು ಬೆಲ್ಲದ ಪಾನಕ ತುಂಬಾ ಗುಣಕಾರಿ. ಹುಣಸೇಸಪ್ಪಿನ ರಸವನ್ನು ಮೊಸರಿನಲ್ಲಿ ಕಲಕಿ, ಸೇವಿಸುವುದರಿಂದ ಮೂತ್ರ ವಿಸರ್ಜನೆಯಲ್ಲಿ ಉರಿ ಇದ್ದರೆ ಆಗುವುದು. ಹುಣಸೆ ಚಿಗುರು ಹಾಗು ನುಗ್ಗೆಕಾಯಿ ಸಾರು ತುಂಬಾ ಆರೋಗ್ಯಕರ. ಹುಣಸೆ ಚಿಗುರು ಹಾಗು ಎಲೆಮಾವಿನಕಾಯಿಯನ್ನು ಬೇಯಿಸಿ ತಿನ್ನುವುದರಿಂದ ಪಿತ್ತದೋಷ ನಿವಾರಣೆ ಆಗುವುದು.
ಸಂಧಿವಾತದ ಕಾರಣ ಶರೀರದ ಯಾವುದಾದರೂ ಅಂಗದಲ್ಲಿ ಊತವೋ, ನೋವೂ ಉಂಟಾಗಿದ್ದಾಗ, ಹುಣಸೆ ಎಲೆಗಳನ್ನು ಬಿಸಿಮಾಡಿ, ಬಟ್ಟೆಯಲ್ಲಿ ಕಟ್ಟಿ ಕಾವು ಕೊಡುವುದರಿಂದ ಗುಣ ಕಾಣುವುದು. ಹುಣಸೆ ಎಲೆಗಳನ್ನು ಚೆನ್ನಾಗಿ ಕುದಿಸಿದ ನೀರಿನಿಂದ ಬಾಯಿ ಮುಕ್ಕಳಿಸಿದರೆ ಬಾಯಿ ಉಣ್ಣುವಾಸಿ ಆಗುವುದು.
ಸೂಚನೆ: ನಾವು ಹಾಕುವ ಎಲ್ಲ ಮಾಹಿತಿಗಳು ನಮ್ಮ ಸ್ವಂತ ಅನುಭವದ ಮತ್ತು ನಮ್ಮ ಅನಿಸಿಕೆ ಅಭಿಪ್ರಾಯಗಳಲ್ಲ ಕೇವಲ ಸಂಗ್ರಹದ ಮಾಹಿತಿಗಳು ಮಾತ್ರ ಯಾವುದೇ ಭಿನ್ನಾಭಿಪ್ರಾಯಗಳ ವಿಚಾರಗಳಿಗೆ ನಾವು ಜವಾಬ್ದರರಲ್ಲ.